ನುಡಿಸಿರಿ
ಮಂಗಳೂರು: ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 6ರಿಂದ 8ರ ತನಕ ಮುಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ `ಆಳ್ವಾಸ್ ನುಡಿಸಿರಿ - 2009'ರ ಸರ್ವಾಧ್ಯಕ್ಷರಾಗಿ ಸಂಶೋಧಕ ಡಾ.ಹಂ.ಪ.ನಾಗರಾಜಯ್ಯ ಆಯ್ಕೆಯಾಗಿದ್ದಾರೆ.
ನಾಡಿನ ಸಾಂಸ್ಕೃತಿಕ ನೇತಾರ ಡಾ.ಎಂ.ಮೋಹನ ಆಳ್ವರ ನೇತೃತ್ವದಲ್ಲಿ ಕಳೆದ ಐದು ವರ್ಷಗಳಿಂದ ನಿರಂತರವಾಗಿ ಈ ಸಾಹಿತ್ಯ ಸಮ್ಮೇಳನ ನಡೆದು ಬರುತ್ತಿದ್ದು ಆರನೇ ವರ್ಷದ ಸಮ್ಮೇಳನ `ಕನ್ನಡ ಮನಸ್ಸು : ಸಮನ್ವಯದೆಡೆಗೆ' ಎಂಬ ಪರಿಕಲ್ಪನೆಯಲ್ಲಿ ನಡೆಯಲಿದೆ.
ನುಡಿಸಿರಿ ಪ್ರಶಸ್ತಿ
ಕನ್ನಡ ನಾಡು ನುಡಿ ಕಲೆಗೆ ಅನುಪಮ ಸೇವೆ ಸಲ್ಲಿಸಿದ ಹತ್ತು ಮಂದಿಗೆ ನುಡಿಸಿರಿ ಪ್ರಶಸ್ತಿ ನೀಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಿದ್ದಾರೆ.ಸಮ್ಮೇಳನದ ಪರಿಕಲ್ಪನೆಗೆ ಪೂರಕವಾಗಿ ಹಲವು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಸಮಾರೋಪ ಭಾಷಣವನ್ನು ಶ್ರೀ ತ್ರಿವಿಧ ದಾಸೋಹಿ ಶ್ರೀ ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ನೆರವೇರಿಸಲಿದ್ದಾರೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ವೈವಿಧ್ಯತೆ3ದಿನಗಳ ಸಮ್ಮೇಳನದಲ್ಲಿ ನಾಡಿನ ಹೆಸರಾಂತ ಸಾಹಿತಿ, ಚಿಂತಕ, ಕಲಾವಿದರು ಭಾಗವಹಿಸಲಿದ್ದಾರೆ. ಕವಿಸಮಯ, ಕವಿನಮನ, ಕಥಾ ಸಮಯ, ಮಾತಿನ ಮಂಟಪ ಎಂಬ ಕಾರ್ಯಕ್ರಮಗಳು ನಡೆಯಲಿವೆ. ಪ್ರಾತಃಕಾಲ 5ರಿಂದ 7ರ ತನಕ ಮತ್ತು ಮುಸ್ಸಂಜೆ 5ರಿಂದ 12.30ರ ತನಕ ನೃತ್ಯ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೆಸರಾಂತ ಪ್ರತಿಭೆಗಳು ಪ್ರಸ್ತುತ ಪಡಿಸಲಿದ್ದಾರೆ.
ಉಚಿತ ಪ್ರವೇಶ
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಗಳನ್ನಾಗಿಸಿ ಆಹ್ವಾನಿಸಿ ಅವರಲ್ಲಿ ಸಾಹಿತ್ಯ, ಸಂಸ್ಕೃತಿಯ ಕುರಿತು ಸದಭಿರುಚಿ ಬೆಳೆಸಿ ಅವರನ್ನು ಸತ್ಪ್ರಜೆಯನ್ನಾಗಿ ರೂಪಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿನಿಧಿ ಶುಲ್ಕ
ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಪ್ರತಿನಿಧಿ ಶುಲ್ಕ 100 ವಿಧಿಸಲಾಗಿದೆ. ಪ್ರತಿನಿಧಿ ಶುಲ್ಕವನ್ನು ನಗದು/ಮನಿಯಾರ್ಡರ್/ಡಿ.ಡಿ.ರೂಪದಲ್ಲಿ ಪಾವತಿಮಾಡಬಹುದು. ಡಿ.ಡಿ.ಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹೆಸರಿನಲ್ಲಿ ಪಡೆಯುವಂತೆ ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08258-238104 ನಿಂದ 238111 ಸಂಪರ್ಕಿಸಬಹುದು.
Subscribe to:
Post Comments (Atom)
Video

0 comments:
Post a Comment