ಈ ಕನಸು

ಇದು ವರ್ಷದ ಕನಸು

ಈ ಕನಸು.ಕಾಂ...ಇದೀಗ 5ನೇ ವರುಷಕ್ಕೆ ಪಾದಾರ್ಪಣೆ...ನಿಮ್ಮ ಅಭಿಪ್ರಾಯಗಳನ್ನು ನಮಗೆ ತಿಳಿಸಿ... ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ರಾಜ್ಯ - ರಾಷ್ಟ್ರ

ಫೆ.3-7: ಸ್ವರಾಜ್ಯಮೈದಾನದಲ್ಲಿ
ಮೂಡಬಿದಿರೆ:ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 3ರಿಂದ 7ರ ತನಕ ಅಖಿಲ ಭಾರತ ಅಂತರ್ ವಿ.ವಿ. ಪುರುಷರ ಬಾಲ್ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ ನಡೆಯಲಿದೆ. ರಾಷ್ಟ್ರದ 65ವಿಶ್ವವಿದ್ಯಾನಿಲಯಗಳ 650ಕ್ರೀಡಾಪಟುಗಳು ಹಾಗೂ 120 ತರಬೇತುದಾರರು ಭಾಗವಹಿಸಲಿದ್ದಾರೆ.ಇದಕ್ಕಾಗಿ ಪೂರ್ವಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.




ಮೂಡಬಿದಿರೆಯ ಸ್ವರಾಜ್ಯ ಮೈದಾನದಲ್ಲಿ 6 ಅಂಗಣಗಳಲ್ಲಿ ಬಾಲ್ ಬ್ಯಾಂಡ್ಮಿಂಟನ್ ನಡೆಯಲಿದ್ದು ಕರ್ನಾಟಕದ ಪ್ರಥಮ ಏಕಲವ್ಯ ಪ್ರಶಸ್ತಿ ವಿಜೇತ ಬಾಲ್ಬ್ಯಾಂಡ್ಮಿಂಟನ್ ಪಟು ಮಹಮ್ಮದ್ ಇಲ್ಯಾಸ್ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಪಂದ್ಯಾಟ ನಾಕೌಟ್ ಕಮ್ ಲೀಗ್ ಮಾದರಿಯಲ್ಲಿ ನಡೆಯಲಿದೆ.
ಕ್ವಾರ್ಟರ್ ಫೈನಲ್ ತನಕ ನಾಕೌಟ್ ಹಾಗೂ ಸೆಮಿಫೈನಲ್ ಪಂದ್ಯಾಟ ಲೀಗ್ ಮಾದರಿಯಲ್ಲಿ ನಡೆಯಲಿದೆ. ಕಳೆದ ಬಾರಿ ಅಖಿಲ ಭಾರತ ವಿ.ವಿ.ಪಂದ್ಯಾಟ ಮದ್ರಾಸ್ ವಿ.ವಿ.ಆಶ್ರಯದಲ್ಲಿ ನಡೆದಿತ್ತು.
ತಮಿಳ್ನಾಡಿನ ಅಣ್ಣಾಮಲೈ ವಿ.ವಿ. ಕಳೆದ ಬಾರಿಯ ವಿಜೇತ ತಂಡವಾಗಿ ಹೊರಹೊಮ್ಮಿತ್ತು. ಆಂದ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ.ರನ್ನರ್ಸ್ ಅಪ್ ಪಡೆದಿತ್ತು.ಮಂಗಳೂರು ವಿ.ವಿ. ತೃತೀಯ ಸ್ಥಾನಪಡೆದುಕೊಂಡಿತ್ತು.
ತರಬೇತಿ: ಈ ಬಾರಿಯ ಬಾಲ್ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ಗಾಗಿ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ನಾಯಕ ಪವನ್ ನೇತೃತ್ವದಲ್ಲಿ ವ್ಯವಸ್ಥಿತ ತರಬೇತಿ ನಡೆಯುತ್ತಿದೆ. ಫೆಬ್ರವರಿ 7ರಂದು ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರದ ಪ್ರಥಮ ಅರ್ಜುನ ಪ್ರಶಸ್ತಿ ವಿಜೇತ ಬಾಲ್ ಬ್ಯಾಂಡ್ಮಿಂಟನ್ ಆಟಗಾರ ಆಂದ್ರಪ್ರದೇಶದ ಪಿಚ್ಚಯ್ಯ ಬಹುಮಾನ ವಿತರಿಸಲಿದ್ದಾರೆ.
ಆಳ್ವಾಸ್ ಎಜುಕೇಶನ್ ಫೌಂಡೇಶನ್ ನಿರಂತರವಾಗಿ ಶಿಕ್ಷಣ, ಸಾಹಿತ್ಯ, ಕ್ರೀಡೆ, ಕಲೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಏಕಲವ್ಯ ಕ್ರೀಡಾಕೂಟ, ಆಳ್ವಾಸ್ ವಿರಾಸತ್, ಆಳ್ವಾಸ್ ನುಡಿಸಿರಿ ಮೊದಲಾದ ರಾಷ್ಟ್ರೀಯಮಟ್ಟದ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದೆ.
ರಾಜ್ಯ,ರಾಷ್ಟ್ರೀಯಮಟ್ಟದ ಕ್ರೀಡಾಪಟುಗಳನ್ನು ನಾಡಿಗೆ ನೀಡಿದ ಹೆಮ್ಮೆ ಆಳ್ವಾಸ್ ಶಿಕ್ಷಣ ಸಂಸ್ಥೆಗಿದೆ ಎಂದವರು ತಿಳಿಸಿದರು. ಮಂಗಳೂರು ವಿ.ವಿ.ದೈ.ಶಿ.ನಿ.ನಾಗಲಿಂಗಪ್ಪ, ಆಳ್ವಾಸ್ ಕಾಲೇಜು ಪ್ರಾಂಶುಪಾಲ ಪ್ರೊ.ಕುರಿಯನ್, ಉಪನ್ಯಾಸಕ ಹರೀಶ್ ಆದೂರು ಉಪಸ್ಥಿತರಿದ್ದರು.

0 comments:

Post a Comment