ಪ್ರಾದೇಶಿಕ ಸುದ್ದಿ
ಮೂಲ್ಕಿ:ಕನ್ನಡ ನಾಡು ನುಡಿಯ ಬೆಳವಣಿಗೆಗೆ ಸಹಕಾರ ನೀಡುವುದು ಕನ್ನಡಿಗರಾದ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಬುಧವಾರ ಕರ್ನಾಟಕ ಶುದ್ಧೀಕರಣ ಹೋರಾಟ ವೇದಿಕೆಯ ರಾಜ್ಯ ಸಮಿತಿಯ ಆಶ್ರಯದಲ್ಲಿ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಕರ್ನಾಟಕದ 56ಗಡಿ ಪ್ರದೇಶಗಳಲ್ಲಿ ಸಂಚರಿಸಿ ನಾಡು ನುಡಿ,ಜಲ,ಸಂಸ್ಕೃತಿಯ ಬಗ್ಗೆ ಜಾಗೃತಿ ನೀಡುವ ಜೊತೆಗೆ ಸಮಸ್ತ ಕನ್ನಡಿಗರಿಗೆ ಗಂಗಾವತಿಗೆ ಅಹ್ವಾನ ನೀಡಲು ಬಂದಿರುವ ತಂಡವನ್ನು ಸ್ವಾಗತಿಸಿ ಮಾತನಾಡಿದರು.
ಮಾತೃ ಭಾಷೆಯ ಜೊತೆಗೆ ನಮ್ಮ ರಾಜ್ಯ ಭಾಷೆಗೆ ಮನ್ನಣೆ ನೀಡುವುದರೊಂದಿಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಬೇಕು ಎಂದ ಅವರು ಗಂಗಾವತಿಯಲ್ಲಿ ನಡೆಯಲಿರುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಈ ಸಂದರ್ಭ ವೇದಿಕೆಯ ರಾಜ್ಯಾಧ್ಯಕ್ಷ ಹೆಚ್.ಕೃಷ್ಣಪ್ಪ ಗುಣಸಾಗರ,ರಾಜ್ಯ ಉಪಾಧ್ಯಕ್ಷೆಂ.ಎಸ್.ಹನುಮಂತಪ್ಪ,ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಆರ್.ಶಕುಂತಲಾ,ಎಂ.ದೇವಪ್ರೀಯ,ಕ.ಸಾಪ ತಾಲೂಕು ಅಧ್ಯಕ್ಷ ಸವರ್ೋತ್ತಮ ಅಂಚನ್, ಮೂಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಹರಿಶ್ಚಂದ್ರ ಪಿ.ಸಾಲ್ಯಾನ್,ಲಯನ್ಸ್ ಅಧ್ಯಕ್ಷ ಹರೀಶ್ ಪುತ್ರನ್,ಎಂ.ಪಿ.ಕಾಮತ್,ನ್ಯಾಯವಾದಿ ಸತೀಶ್ ಕಾಮತ್,ಗೋಪೀನಾಥ ಪಡಂಗ,ಮಾಧವ ಶೇರ್ವೆಗಾರ್ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ - ವರದಿ : ಭಾಗ್ಯವಾನ್ ಮುಲ್ಕಿ.
Subscribe to:
Post Comments (Atom)
Video

0 comments:
Post a Comment