ಆಟ - ಅವಲೋಕನ
ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಅಂತರ್ ಕಾಲೇಜು ಅಥ್ಲೇಟಿಕ್ ಚಾಂಪಿಯನ್ ಶಿಪ್ 2011 - 12 ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಉದ್ಘಾಟನೆಗೊಂಡಿತು.
ಅಕ್ರಮ ವಿಧಾನದಿಂದ ಗೆಲ್ಲುವ ಬದಲು ಸೋಲುವುದನ್ನು ಕಲಿಸಿ ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳು ಇಂದಿನ ಸಮಾಜಕ್ಕೆ ಒಂದು ಮಾದರಿಯಾಗಿದೆ. ಆ ರೀತಿಯಲ್ಲಿ ಪ್ರಾಮಾಣಿಕತೆಯನ್ನು ನಾವು ಕಲಿತುಕೊಳ್ಳಬೇಕೆಂದು ಉದ್ಘಾಟನೆ ನೆರವೇರಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಚಿನ್ನಪ್ಪ ಗೌಡ ಆಶಯ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಡಾ.ಎಂ.ಮೋಹನ ಆಳ್ವ ವಹಿಸಿದ್ದರು. ಶಾಸಕ ಅಭಯಚಂದ್ರ ಜೈನ್, ಮಂಗಳೂರು ವಿ.ವಿ. ದೈ.ಶಿ.ನಿರ್ದೇಶಕ ನಾಗಲಿಂಗಪ್ಪ, ಅಂತಾರಾಷ್ಟ್ರೀಯ ಅಥ್ಲೇಟ್ ರೋಹಿತ್ ಕುಮಾರ್ ಕಟೀಲು ಉಪಸ್ಥಿತರಿದ್ದರು.




Subscribe to:
Post Comments (Atom)
Video

0 comments:
Post a Comment